ಕೇನೋಪನಿಷತ್
From Wikipedia, the free encyclopedia
ಕೇನೋಪನಿಷತ್ ಅಥವಾ ತಲವಕಾರೋಪನಿಷತ್ ಸಾಮವೇದದ ತಲವಕಾರ ಬ್ರಾಹ್ಮಣಕ್ಕೆ ಸೇರಿದೆ ತಲವಕಾರ ಬ್ರಾಹ್ಮಣಕ್ಕೆ "ಜೈಮಿನೀಯ ಬ್ರಾಹ್ಮಣ"ವೆಂದೂ ಹೆಸರಿದೆ. ಕೇನೋಪನಿಷತ್ ತಲವಕಾರ ಬ್ರಾಹ್ಮಣಕ್ಕೆ ಸೇರಿರುವದರಿಂದ ಇದನ್ನು ತಲವಕಾರ ಉಪನಿಷತ್ ಎಂದೂ ಕರೆಯುತ್ತಾರೆ.ಈ ಉಪನಿಷತ್ತಿನ ಮೊದಲ ಮಂತ್ರವು "ಕೇನ" ಎಂಬ ಪದದಿಂದ ಆರಂಭವಾಗುವದರಿಂದ ಇದಕ್ಕೆ "ಕೇನೋಪನಿಷತ್" ಎಂಬ ಹೆಸರು ಬಂದಿದೆ.ಕೇನ ಎಂದರೆ ಯಾರಿಂದ ಎಂದು ಅರ್ಥ.ಈ ಜಗತ್ತಿನ ಸೃಷ್ಟಿ ಯಾರಿಂದ ಆಯಿತು ಎಂಬ ಪ್ರಶ್ನೆಗೆ ಉತ್ತರವು ಕೇನೋಪನಿಷತ್ತಿನಲ್ಲಿದೆ. ಈ ಉಪನಿಷತ್ತಿಗೆ ಶ್ರೀ ಶಂಕರಾಚಾರ್ಯರದೆಂದು ಪ್ರಸಿದ್ಧವಾದ ಎರಡು ಭಾಷ್ಯಗಳಿವೆ.ಒಂದಕ್ಕೆ ಪದಭಾಷ್ಯವೆಂದೂ ಇನ್ನೊಂದಕ್ಕೆ ವಾಕ್ಯಭಾಷ್ಯವೆಂದೂ ಹೆಸರುಗಳುಂಟು.ಆದರೆ ವಾಕ್ಯಭಾಷ್ಯವು ಶಂಕರಾಚಾರ್ಯರದೇ ಎಂದು ಹೇಳಲು ಕೆಲವು ಸಂದೇಹಗಳಿವೆ. ಶಂಕರಾಚಾರ್ಯರು ತಮ್ಮ ಭಾಷ್ಯದಲ್ಲಿ ಹೇಳಿರುವಂತೆ ಈ ಉಪನಿಷತ್ತು ಬ್ರಹ್ಮ ವಿಷಯಿಕವಾಗಿದೆ. ಅಧ್ಯಯನಾನುಕೂಲಕ್ಕಾಗಿ ಈ ಉಪನಿಷತ್ತು ನಾಲ್ಕು ಖಂಡಗಳಾಗಿ ವಿಭಜಿತವಾಗಿದೆ.
ಹಿಂದೂ ಧರ್ಮಗ್ರಂಥಗಳು | |
ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ | |
ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ | |
[[ಮಾಹಕಾವ್ಯ |
ಮಾಹಕಾವ್ಯಗಳು]] |
ಇತರ ಧರ್ಮಗ್ರಂಥಗಳು
ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ |