ಪಂಚಾಕ್ಷರಿ ಗವಾಯಿಗಳು
From Wikipedia, the free encyclopedia
ಶ್ರೀ ಪಂಚಾಕ್ಷರ ಗವಯಿಗಳು ಗದುಗಿನಲ್ಲಿರುವ ಪ್ರಸಿದ್ಧ ಸಂಗೀತ ಆಶ್ರಮವಾದ “ಶ್ರೀ ವೀರೇಶ್ವರ ಪುಣ್ಯಾಶ್ರಮ”ದ ಸಂಸ್ಥಾಪಕರು. ಇವರು ಜನಿಸಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ, ದಿನಾಂಕ: ೨, ಫೆಬ್ರುವರಿ ೧೮೯೨ರಂದು. ಇವರ ತಾಯಿ ನೀಲಮ್ಮ ಹಾಗು ತಂದೆ ಗುರುಪಾದಯ್ಯ ಚರಂತಿಮಠ. ಗದಿಗೆಯ್ಯ ಇವರ ಹುಟ್ಟುಹೆಸರು.
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಗದಿಗೆಯ್ಯ ಹಾಗು ಇವರ ಅಣ್ಣ ಗುರುಬಸಯ್ಯ ಇಬ್ಬರೂ ಹುಟ್ಟುಕುರುಡರು. ಸ್ಥಳೀಯವಾಗಿ ಸಾಧ್ಯವಿದ್ದ ಸಂಗೀತ ಶಿಕ್ಷಣವನ್ನು ಪಡೆದಿದ್ದರು. ಒಮ್ಮೆ ಶ್ರೀ ಹಕ್ಕಲ ಬಸವೇಶ್ವರ ಜಾತ್ರೆಯಲ್ಲಿ ಹಾಡುತ್ತಿದ್ದ ಈ ಕುರುಡು ಬಾಲಕರ ಹಾಡು ಕೇಳಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು ಈ ಎಳೆಯರನ್ನು ತಮ್ಮ ಉಡಿಯಲ್ಲಿ ಹಾಕಿಕೊಂಡರು.